ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
Cross references
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.