ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
Cross references
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.