ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
Cross references
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.