ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
Cross references
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.