Cross references
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.