Home Bibles 1 ಕೊರಿಂಥದವರಿಗೆ 15:56 · ಕನ್ನಡ ಬೈಬಲ್
1 ಕೊರಿಂಥದವರಿಗೆ 15:56 · ಕನ್ನಡ ಬೈಬಲ್

ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.

Cross references

ಆದಿಕಾಂಡ 3:17

ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

ಕೀರ್ತನೆಗಳು 90:3

ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;

ಸಾಮೇತಿಗಳು 14:32

ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.

ಯೋಹಾನ 8:21

ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

ಯೋಹಾನ 8:24

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 4:15

ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;

ರೋಮಾಪುರದವರಿಗೆ 5:12

ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ರೋಮಾಪುರದವರಿಗೆ 5:15

ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 5:17

ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 6:23

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ರೋಮಾಪುರದವರಿಗೆ 7:5

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಹೆಬ್ರಿಯರಿಗೆ 9:27

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

Interlinear

Choose Theme