ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Cross references
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು