ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
Cross references
ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.