ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
Cross references
ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.