ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
Cross references
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.