ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Cross references
ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.