ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
Cross references
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.