ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Cross references
ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.