ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
Cross references
ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.