ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
Cross references
ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ