Cross references
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.