ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
Cross references
ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.