ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
Cross references
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.