ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.