ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
Cross references
ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.