ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
Cross references
ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.