ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Cross references
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.