ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
Cross references
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು