Home Bibles 1 ಯೋಹಾನ 5:16 · ಕನ್ನಡ ಬೈಬಲ್
1 ಯೋಹಾನ 5:16 · ಕನ್ನಡ ಬೈಬಲ್

ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ

Cross references

ಆದಿಕಾಂಡ 20:7

ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ಆದಿಕಾಂಡ 20:17

ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

ನಿರ್ಗಮಕಾಂಡ 32:10

ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.

ನಿರ್ಗಮಕಾಂಡ 32:31

ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.

ನಿರ್ಗಮಕಾಂಡ 34:9

ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.

ಅಂಕೆಗಳ ಪುಸ್ತಕ 12:13

ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಅಂಕೆಗಳ ಪುಸ್ತಕ 14:11

ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?

ಅಂಕೆಗಳ ಪುಸ್ತಕ 15:30

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಅಂಕೆಗಳ ಪುಸ್ತಕ 16:26

ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.

ದ್ವಿತೀಯೋಪದೇಶಕಾಂಡ 9:18

ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.

1 ಸಮುವೇಲ 2:25

ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.

2 ದಿನವೃತ್ತಾಂತ 30:18

ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

ಯೋಬ 42:7

ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.

ಕೀರ್ತನೆಗಳು 106:23

ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.

ಯೆರೆಮಿಯ 7:16

ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.

ಯೆರೆಮಿಯ 11:14

ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.

ಯೆರೆಮಿಯ 14:11

ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?

ಯೆರೆಮಿಯ 15:1

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಯೆಹೆಜ್ಕೇಲ 22:30

ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಆಮೋಸ 7:1

ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.

ಮತ್ತಾಯ 12:31

ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

ಮಾರ್ಕ 3:28

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;

ಲೂಕ 12:10

ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.

ಯೋಹಾನ 17:9

ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.

2 ತಿಮೋಥೆಯ 4:14

ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

ಹೆಬ್ರಿಯರಿಗೆ 6:4

ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಯಾಕೋಬ 5:14

ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

2 ಪೇತ್ರ 2:20

ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

Interlinear

Choose Theme