ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
Cross references
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.