ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
Cross references
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.