ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
Cross references
ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ