ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
Cross references
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.