ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
Cross references
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.