ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
Cross references
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ.
ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.