Home Bibles 1 ಅರಸುಗಳು 12:15 · ಕನ್ನಡ ಬೈಬಲ್
1 ಅರಸುಗಳು 12:15 · ಕನ್ನಡ ಬೈಬಲ್

ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.

Cross references

ಆದಿಕಾಂಡ 24:50

ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.

ದ್ವಿತೀಯೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ನ್ಯಾಯಾಧಿಪತಿಗಳು 14:4

ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.

1 ಸಮುವೇಲ 15:29

ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.

2 ಸಮುವೇಲ 17:14

ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

1 ಅರಸುಗಳು 11:11

ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.

1 ಅರಸುಗಳು 11:29

ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.

1 ಅರಸುಗಳು 11:31

ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.

1 ಅರಸುಗಳು 12:24

ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.

1 ಅರಸುಗಳು 22:23

ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.

2 ಅರಸುಗಳು 9:36

ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.

2 ಅರಸುಗಳು 10:10

ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.

2 ದಿನವೃತ್ತಾಂತ 10:15

ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.

2 ದಿನವೃತ್ತಾಂತ 22:7

ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.

2 ದಿನವೃತ್ತಾಂತ 25:16

ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

2 ದಿನವೃತ್ತಾಂತ 25:20

ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.

ಕೀರ್ತನೆಗಳು 5:10

ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.

ಯೆಶಾಯ 14:13

ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.

ಯೆಶಾಯ 46:10

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ದಾನಿಯೇಲ 4:35

ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

ಆಮೋಸ 3:6

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

ಯೋಹಾನ 19:23

ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.

ಯೋಹಾನ 19:28

ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

ಯೋಹಾನ 19:32

ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:17

ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

Interlinear

Choose Theme