ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
Cross references
ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.