ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
Cross references
ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು