ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
Cross references
ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.