Home Bibles 1 ಅರಸುಗಳು 13:1 · ಕನ್ನಡ ಬೈಬಲ್
1 ಅರಸುಗಳು 13:1 · ಕನ್ನಡ ಬೈಬಲ್

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.

Cross references

ಅಂಕೆಗಳ ಪುಸ್ತಕ 16:40

ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.

1 ಸಮುವೇಲ 2:27

ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?

1 ಅರಸುಗಳು 12:22

ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ

1 ಅರಸುಗಳು 12:32

ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

1 ಅರಸುಗಳು 12:33

ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

1 ಅರಸುಗಳು 13:5

ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.

1 ಅರಸುಗಳು 13:9

ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.

1 ಅರಸುಗಳು 13:26

ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.

1 ಅರಸುಗಳು 13:32

ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.

1 ಅರಸುಗಳು 20:35

ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.

2 ಅರಸುಗಳು 23:17

ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.

2 ದಿನವೃತ್ತಾಂತ 9:29

ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?

2 ದಿನವೃತ್ತಾಂತ 26:18

ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.

ಯೆರೆಮಿಯ 11:12

ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.

ಯೆರೆಮಿಯ 25:3

ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.

ಆಮೋಸ 7:13

ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.

ಆಮೋಸ 7:16

ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್‌ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.

ಮಲಾಕಿ 1:11

ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

1 ತೆಸಲೋನಿಕದವರಿಗೆ 4:15

ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.

ಪ್ರಕಟನೆ 8:3

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

Interlinear

Choose Theme