ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
Cross references
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.