Home Bibles 1 ಅರಸುಗಳು 13:21 · ಕನ್ನಡ ಬೈಬಲ್
1 ಅರಸುಗಳು 13:21 · ಕನ್ನಡ ಬೈಬಲ್

ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ

Cross references

ಆದಿಕಾಂಡ 3:7

ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.

ಲೇವ್ಯಕಾಂಡ 10:3

ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.

ಅಂಕೆಗಳ ಪುಸ್ತಕ 20:12

ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

ಅಂಕೆಗಳ ಪುಸ್ತಕ 20:24

ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.

1 ಸಮುವೇಲ 4:18

ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.

1 ಸಮುವೇಲ 13:13

ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.

1 ಸಮುವೇಲ 15:19

ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

2 ಸಮುವೇಲ 6:7

ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

2 ಸಮುವೇಲ 12:9

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

2 ಸಮುವೇಲ 24:13

ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.

1 ಅರಸುಗಳು 13:17

ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.

1 ಅರಸುಗಳು 20:36

ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.

ಎಸ್ತೇರ್ 6:13

ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.

ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಗಲಾತ್ಯದವರಿಗೆ 1:8

ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಪ್ರಕಟನೆ 3:19

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

Interlinear

Choose Theme