ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
Cross references
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ