ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
Cross references
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.
ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.