ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
Cross references
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.