ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
Cross references
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,