ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
Cross references
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.