ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
Cross references
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?