ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
Cross references
ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.