ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು