ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
Cross references
ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.