ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
Cross references
ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.