ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.