ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
Cross references
ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.