ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
Cross references
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.